ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
Cross references
ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.