ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
Cross references
ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.