ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
Cross references
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.