ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
Cross references
ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.