ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
Cross references
ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.