ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
Cross references
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.