ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.
Cross references
ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).