ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Cross references
ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?