ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
Cross references
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.