ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
Cross references
ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.