ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
Cross references
ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.