Home Bibles ನಿರ್ಗಮಕಾಂಡ 18:21 · ಕನ್ನಡ ಬೈಬಲ್
ನಿರ್ಗಮಕಾಂಡ 18:21 · ಕನ್ನಡ ಬೈಬಲ್

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

Cross references

ಆದಿಕಾಂಡ 22:12

ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.

ಆದಿಕಾಂಡ 42:18

ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.

ನಿರ್ಗಮಕಾಂಡ 17:9

ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.

ನಿರ್ಗಮಕಾಂಡ 18:25

ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ನಿರ್ಗಮಕಾಂಡ 23:2

ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.

ಅಂಕೆಗಳ ಪುಸ್ತಕ 10:4

ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.

ದ್ವಿತೀಯೋಪದೇಶಕಾಂಡ 1:13

ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.

ದ್ವಿತೀಯೋಪದೇಶಕಾಂಡ 1:15

ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ಯೆಹೋಶುವ 22:14

ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್‌ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.

1 ಸಮುವೇಲ 8:3

ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.

1 ಸಮುವೇಲ 8:12

ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.

1 ಸಮುವೇಲ 12:3

ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.

2 ಸಮುವೇಲ 18:1

ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.

2 ಸಮುವೇಲ 23:3

ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.

1 ಅರಸುಗಳು 3:9

ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.

1 ಅರಸುಗಳು 18:3

ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.

1 ಅರಸುಗಳು 18:12

ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.

2 ದಿನವೃತ್ತಾಂತ 19:5

ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.

2 ದಿನವೃತ್ತಾಂತ 19:7

ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

ಎಜ್ರಾ 7:25

ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.

ನೆಹೆಮ್ಯ 5:9

ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.

ನೆಹೆಮ್ಯ 7:2

ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.

ಯೋಬ 29:16

ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.

ಯೋಬ 31:13

ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,

ಕೀರ್ತನೆಗಳು 15:5

ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

ಕೀರ್ತನೆಗಳು 26:9

ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.

ಸಾಮೇತಿಗಳು 28:2

ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.

ಸಭಾಪ್ರಸಂಗಿ 12:13

ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.

ಯೆಶಾಯ 16:5

ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಯೆಶಾಯ 59:4

ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

ಯೆಶಾಯ 59:14

ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.

ಯೆರೆಮಿಯ 5:1

ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.

ಯೆಹೆಜ್ಕೇಲ 18:8

ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,

ಯೆಹೆಜ್ಕೇಲ 22:12

ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.

ಜೆಕರ್ಯ 7:9

ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

ಜೆಕರ್ಯ 8:16

ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.

ಲೂಕ 18:2

ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.

ಲೂಕ 18:4

ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.

Interlinear

Choose Theme