ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
Cross references
ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.