ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
Cross references
ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.