ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
Cross references
ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.