ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
Cross references
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.