ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
Cross references
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.