ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Cross references
ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.