ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.
ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.