Home Bibles ನಿರ್ಗಮಕಾಂಡ 19:5 · ಕನ್ನಡ ಬೈಬಲ್
ನಿರ್ಗಮಕಾಂಡ 19:5 · ಕನ್ನಡ ಬೈಬಲ್

ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

Cross references

ನಿರ್ಗಮಕಾಂಡ 6:7

ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.

ನಿರ್ಗಮಕಾಂಡ 9:29

ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.

ನಿರ್ಗಮಕಾಂಡ 15:26

ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ನಿರ್ಗಮಕಾಂಡ 23:22

ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.

ನಿರ್ಗಮಕಾಂಡ 24:7

ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.

ನಿರ್ಗಮಕಾಂಡ 34:9

ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.

ಲೇವ್ಯಕಾಂಡ 20:24

ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 4:20

ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

ದ್ವಿತೀಯೋಪದೇಶಕಾಂಡ 5:2

ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.

ದ್ವಿತೀಯೋಪದೇಶಕಾಂಡ 7:6

ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.

ದ್ವಿತೀಯೋಪದೇಶಕಾಂಡ 9:29

ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

ದ್ವಿತೀಯೋಪದೇಶಕಾಂಡ 10:14

ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.

ದ್ವಿತೀಯೋಪದೇಶಕಾಂಡ 11:27

ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.

ದ್ವಿತೀಯೋಪದೇಶಕಾಂಡ 14:2

ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.

ದ್ವಿತೀಯೋಪದೇಶಕಾಂಡ 14:21

ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.

ದ್ವಿತೀಯೋಪದೇಶಕಾಂಡ 26:18

ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.

ದ್ವಿತೀಯೋಪದೇಶಕಾಂಡ 26:19

ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.

ದ್ವಿತೀಯೋಪದೇಶಕಾಂಡ 28:1

ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.

ದ್ವಿತೀಯೋಪದೇಶಕಾಂಡ 32:8

ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.

ಯೆಹೋಶುವ 24:24

ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.

1 ಸಮುವೇಲ 15:22

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

1 ಅರಸುಗಳು 8:53

ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.

ಯೋಬ 41:3

ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?

ಯೋಬ 41:11

ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.

ಕೀರ್ತನೆಗಳು 24:1

ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಕೀರ್ತನೆಗಳು 25:10

ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.

ಕೀರ್ತನೆಗಳು 50:11

ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.

ಕೀರ್ತನೆಗಳು 103:17

ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ

ಕೀರ್ತನೆಗಳು 135:4

ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.

ಪರಮಗೀತ 8:12

ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.

ಯೆಶಾಯ 1:19

ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;

ಯೆಶಾಯ 41:8

ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;

ಯೆಶಾಯ 43:1

ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

ಯೆಶಾಯ 56:4

ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--

ಯೆರೆಮಿಯ 10:16

ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.

ಯೆರೆಮಿಯ 11:4

ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.

ಯೆರೆಮಿಯ 13:11

ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;

ಯೆರೆಮಿಯ 31:31

ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.

ದಾನಿಯೇಲ 4:34

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

Interlinear

Choose Theme