ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Cross references
ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು