Cross references
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
ಕೊಲ್ಲಬೇಡ
ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.