Home Bibles ನಿರ್ಗಮಕಾಂಡ 20:13 · ಕನ್ನಡ ಬೈಬಲ್
ನಿರ್ಗಮಕಾಂಡ 20:13 · ಕನ್ನಡ ಬೈಬಲ್

ಕೊಲೆ ಮಾಡಬಾರದು.

Cross references

ಆದಿಕಾಂಡ 4:8

ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

ಆದಿಕಾಂಡ 9:5

ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

ನಿರ್ಗಮಕಾಂಡ 21:12

ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

ನಿರ್ಗಮಕಾಂಡ 21:14

ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.

ನಿರ್ಗಮಕಾಂಡ 21:20

ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.

ನಿರ್ಗಮಕಾಂಡ 21:29

ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.

ಲೇವ್ಯಕಾಂಡ 24:21

ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.

ಅಂಕೆಗಳ ಪುಸ್ತಕ 35:16

ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

ದ್ವಿತೀಯೋಪದೇಶಕಾಂಡ 19:11

ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ

2 ಸಮುವೇಲ 12:9

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

2 ಅರಸುಗಳು 21:16

ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.

2 ದಿನವೃತ್ತಾಂತ 24:22

ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.

ಕೀರ್ತನೆಗಳು 10:8

ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;

ಸಾಮೇತಿಗಳು 1:11

ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.

ಸಾಮೇತಿಗಳು 1:18

ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.

ಯೆಶಾಯ 26:21

ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆರೆಮಿಯ 26:15

ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.

ಮತ್ತಾಯ 5:21

ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.

ಮತ್ತಾಯ 19:18

ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.

ಅಪೋಸ್ತಲರ ಕೃತ್ಯಗಳು 16:28

ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 28:4

ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

ರೋಮಾಪುರದವರಿಗೆ 13:9

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ಗಲಾತ್ಯದವರಿಗೆ 5:21

ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.

1 ತಿಮೋಥೆಯ 1:9

ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

ಯಾಕೋಬ 2:11

ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

1 ಯೋಹಾನ 3:12

ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

Interlinear

Choose Theme