ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
Cross references
ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.