ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
Cross references
ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ಕರ್ತನು ಮೋಶೆಯೊಂದಿಗೆ ಮಾತನಾಡಿ--
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.