ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
Cross references
ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
ಕರ್ತನು ಯೆಹೋಶುವನಿಗೆ--
ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.