ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
Cross references
ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.