ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
Cross references
ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.