Home Bibles ನಿರ್ಗಮಕಾಂಡ 22:9 · ಕನ್ನಡ ಬೈಬಲ್
ನಿರ್ಗಮಕಾಂಡ 22:9 · ಕನ್ನಡ ಬೈಬಲ್

ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

Cross references

ಆದಿಕಾಂಡ 31:39

ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.

ನಿರ್ಗಮಕಾಂಡ 18:21

ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ನಿರ್ಗಮಕಾಂಡ 22:4

ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.

ನಿರ್ಗಮಕಾಂಡ 22:7

ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.

ನಿರ್ಗಮಕಾಂಡ 22:28

ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.

ನಿರ್ಗಮಕಾಂಡ 23:6

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

ಲೇವ್ಯಕಾಂಡ 6:5

ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.

ಅಂಕೆಗಳ ಪುಸ್ತಕ 5:6

ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 25:1

ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.

1 ಅರಸುಗಳು 8:31

ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ

2 ದಿನವೃತ್ತಾಂತ 19:10

ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.

ಮತ್ತಾಯ 6:14

ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಮತ್ತಾಯ 18:35

ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

ಲೂಕ 17:3

ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.

Interlinear

Choose Theme