ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
Cross references
ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.