ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
Cross references
ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,