Home Bibles ನಿರ್ಗಮಕಾಂಡ 23:27 · ಕನ್ನಡ ಬೈಬಲ್
ನಿರ್ಗಮಕಾಂಡ 23:27 · ಕನ್ನಡ ಬೈಬಲ್

ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.

Cross references

ಆದಿಕಾಂಡ 35:5

ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ನಿರ್ಗಮಕಾಂಡ 15:14

ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.

ನಿರ್ಗಮಕಾಂಡ 34:24

ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.

ಅಂಕೆಗಳ ಪುಸ್ತಕ 22:3

ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

ದ್ವಿತೀಯೋಪದೇಶಕಾಂಡ 2:25

ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.

ದ್ವಿತೀಯೋಪದೇಶಕಾಂಡ 6:19

ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.

ದ್ವಿತೀಯೋಪದೇಶಕಾಂಡ 7:23

ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.

ದ್ವಿತೀಯೋಪದೇಶಕಾಂಡ 11:23

ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.

ದ್ವಿತೀಯೋಪದೇಶಕಾಂಡ 11:25

ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.

ಯೆಹೋಶುವ 2:9

ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.

1 ಸಮುವೇಲ 14:15

ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.

2 ಅರಸುಗಳು 7:6

ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.

2 ದಿನವೃತ್ತಾಂತ 14:14

ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.

ಕೀರ್ತನೆಗಳು 18:40

ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.

Interlinear

Choose Theme