Cross references
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?