Home Bibles ನಿರ್ಗಮಕಾಂಡ 23:7 · ಕನ್ನಡ ಬೈಬಲ್
ನಿರ್ಗಮಕಾಂಡ 23:7 · ಕನ್ನಡ ಬೈಬಲ್

ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.

Cross references

ನಿರ್ಗಮಕಾಂಡ 20:13

ಕೊಲೆ ಮಾಡಬಾರದು.

ನಿರ್ಗಮಕಾಂಡ 23:1

ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.

ನಿರ್ಗಮಕಾಂಡ 34:7

ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.

ಲೇವ್ಯಕಾಂಡ 19:11

ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.

ದ್ವಿತೀಯೋಪದೇಶಕಾಂಡ 19:16

ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ

ದ್ವಿತೀಯೋಪದೇಶಕಾಂಡ 27:25

ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

ಯೋಬ 22:23

ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.

ಕೀರ್ತನೆಗಳು 94:21

ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.

ಸಾಮೇತಿಗಳು 4:14

ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.

ಸಾಮೇತಿಗಳು 11:21

ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.

ಸಾಮೇತಿಗಳು 17:15

ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.

ಯೆಶಾಯ 5:20

ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ನಹೂಮ 1:3

ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.

ಲೂಕ 3:14

ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.

ರೋಮಾಪುರದವರಿಗೆ 1:18

ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

ಎಫೆಸದವರಿಗೆ 4:25

ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

1 ತೆಸಲೋನಿಕದವರಿಗೆ 5:22

ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.

Interlinear

Choose Theme