ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
Cross references
ಕೊಲೆ ಮಾಡಬಾರದು.
ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.