ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Cross references
ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.