ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
Cross references
ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.