Home Bibles ನಿರ್ಗಮಕಾಂಡ 24:3 · ಕನ್ನಡ ಬೈಬಲ್
ನಿರ್ಗಮಕಾಂಡ 24:3 · ಕನ್ನಡ ಬೈಬಲ್

ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.

Cross references

ನಿರ್ಗಮಕಾಂಡ 19:8

ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.

ನಿರ್ಗಮಕಾಂಡ 21:1

ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.

ನಿರ್ಗಮಕಾಂಡ 24:7

ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.

ದ್ವಿತೀಯೋಪದೇಶಕಾಂಡ 4:1

ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.

ದ್ವಿತೀಯೋಪದೇಶಕಾಂಡ 4:5

ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.

ದ್ವಿತೀಯೋಪದೇಶಕಾಂಡ 4:45

ಇಸ್ರಾಯೇಲ್‌ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ

ದ್ವಿತೀಯೋಪದೇಶಕಾಂಡ 5:1

ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.

ದ್ವಿತೀಯೋಪದೇಶಕಾಂಡ 5:27

ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.

ದ್ವಿತೀಯೋಪದೇಶಕಾಂಡ 5:31

ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.

ದ್ವಿತೀಯೋಪದೇಶಕಾಂಡ 6:1

ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;

ದ್ವಿತೀಯೋಪದೇಶಕಾಂಡ 11:1

ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.

ಯೆಹೋಶುವ 24:21

ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.

ಯೆಹೋಶುವ 24:22

ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.

2 ದಿನವೃತ್ತಾಂತ 15:14

ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.

2 ದಿನವೃತ್ತಾಂತ 15:15

ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.

ಕೀರ್ತನೆಗಳು 50:5

ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.

ಹಗ್ಗಾಯ 2:5

ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.

ಗಲಾತ್ಯದವರಿಗೆ 3:19

ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

Interlinear

Choose Theme