ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
Cross references
ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.