ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
Cross references
ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.