ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
Cross references
ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.