ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
Cross references
ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.