ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
Cross references
ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.