ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
Cross references
ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.