ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
Cross references
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ