ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
Cross references
ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.