ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
Cross references
ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.