ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
Cross references
ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.