ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Cross references
ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.