ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.